ಭಾನುವಾರ, ಜೂನ್ 13, 2010

ವಿಶ್ವಪ್ರಸಿದ್ಧ ಹಂಪಿ ಕಲ್ಲಿನ ರಥಕ್ಕೆ ಗೋಪುರವಿತ್ತು!


ವಿಶ್ವಪ್ರಸಿದ್ಧ ಹಂಪಿ ಕಲ್ಲಿನ ರಥಕ್ಕೆ ಗೋಪುರವಿತ್ತು!





ಹೌದು ಇದು ಆಶ್ಚರ್ಯವೆನಿಸಿದರೂ ನಿಜ. ವಿಜಯನಗರ ಸಾಮ್ರಾಜ್ಯದಲ್ಲಿನ ಪ್ರಸಿದ್ಧ ದೊರೆ ಶ್ರೀಕೃಷ್ಣ ದೇವರಾಯನ ಆಳ್ವಿಕೆಯ ಕಾಲ ಸುಮಾರು 1520. ಇವನ ಆಳ್ವಿಕೆಯಲ್ಲಿಯೇ ವಿಜಯನಗರ ಉತ್ತುಂಗ ಸ್ಥಿತಿ ತಲುಪಿ, ಸುಂದರವಾದ ವಾಸ್ತು-ಶಿಲ್ಪಗಳು, ದೇಗುಲಗಳ ಕೆತ್ತನೆ ನಡೆದದ್ದು. ಆ ಸಂದರ್ಭದಲ್ಲೇ ಬೆಣಚುಕಲ್ಲಿನಿಂದ ನಿರ್ಮಾಣವಾದ ಈ ರಥಕ್ಕೆ ಚೆಂದಾದ ಗೋಪುರವೊಂದಿತ್ತು. ವಿಜಯನಗರ ಸಾಮ್ರಾಜ್ಯದ ವೈಭವೋಪೇತ ಜನಜೀವನದ ಬಗ್ಗೆ ಇತಿಹಾಸ ಸಂಶೋಧಕ ರಾಬರ್ಟ್ ಸೆವೆಲ್ ಬರೆದ 'ಎ ಫರ್ ಗಾಟನ್ ಎಂಪೈರ್' ಪುಸ್ತಕದಲ್ಲಿ ಹಂಪಿ ಕಲ್ಲಿನ ರಥದ ಬಗ್ಗೆ ವಿಸ್ತಾರವಾಗಿ ಬರೆದಿದ್ದು ಅದರ ಮೂಲಚಿತ್ರವನ್ನು ಕಣ್ಣೆದುರಿಗೆ ತೆರೆದಿಟ್ಟಿದ್ದಾರೆ.

ಈ ಚಿತ್ರವನ್ನು ನೋಡಿದರೆ ಇತಿಹಾಸದ ಗ್ರಹಿಕೆ ಮತ್ತು ನಮಗಿರುವ ಜ್ಞಾನದ ಬಗ್ಗೆ ಯೋಚನೆಗೆ ಅಚ್ಚುತ್ತದೆ. ರಾಬರ್ಟ್ ಸೆವೆಲ್ ಪುಸ್ತಕ ಪ್ರಕಟವಾದದ್ದು 1900ರಲ್ಲಿ. ಈ ಚಿತ್ರವನ್ನು ಸುಮಾರು ಒಂದು ಶತಮಾನದ ಹಿಂದೆ ತೆಗೆದದ್ದು. ಈ ನಡುವೆ 1986ರವರೆಗೆ ಅಂದರೆ ಯುನೆಸ್ಕೋ ವರ್ಲ್ಡ್ ಹೆರಿಟೆಜ್ ಸೈಟ್ ಎಂದು ಘೋಷಿಸುವವರೆಗೂ ಈ ಹಂಪಿಯಗತಿ ಹೇಗಿತ್ತು ಎಂಬುದನ್ನು ಊಹಿಸಬಹುದು. ಗೋಪುರವಿಲ್ಲದ ರಥದಂತೆ ಕಳೆದ ಐದುನೂರು ವರ್ಷಗಳಲ್ಲಿ ಅಲ್ಲಿ ಏನೇನಾಯಿತು ಎಂಬುದು ಅವರವರ ಊಹೆಗೆ ಬಿಟ್ಟದ್ದು. 
ಕೃಪೆ:
http://hallikannada.blogspot.com/search?updated-max=2008-11-08T18%3A50%3A00%2B05%3A30&max-results=7

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ