ಮಂಗಳವಾರ, ಡಿಸೆಂಬರ್ 7, 2010

ವೆಬ್ ಸೈಟಿನಲ್ಲಿ ವೇದಾಂತ ಪಾಠ ಬೇಕೇನು

ಇವತ್ತು ಎಲ್ಲಿ ನೋಡಿದರೂ ಹಿಂಸೆ, ಅಶಾಂತಿ, ಅತೃಪ್ತಿ, ದ್ವೇಷ ಮತ್ತು ಭಯದ ವಾತಾವರಣ. ಭಯ ಹೊರಗೂ ಇದೆ. ಒಳಗೂ ಇದೆ. ಇದನ್ನು ಗೆಲ್ಲುವ ಮಾರ್ಗೋಪಾಯಗಳನ್ನು ವ್ಯಕ್ತಿ ತಾನೇ ಕಂಡುಕೊಳ್ಳಬೇಕಾದ ಆವಶ್ಯಕತೆ ಎಂದಿಗಿಂತ ಇಂದು ಹೆಚ್ಚೇ ಕಂಡುಬಂದಿದೆ. ನೆಮ್ಮದಿ ಪಡೆಯಲು ನಮಗಿರುವ ಸುಲಭವಾದ ಒಂದು ಪರಿಹಾರವೆಂದರೆ "ವೇದಾಂತ ವಿಚಾರ ಚಿಂತನೆ ".

ವಿದ್ಯೆಯನ್ನು, ಜ್ಞಾನವನ್ನು, ಶಾಂತಿ ಸಮಾಧಾನಗಳನ್ನು ಗುರುಕುಲ ಕ್ರಮದಿಂದ ಅಧ್ಯಯನ ಮಾಡುವುದಕ್ಕೆ ಇವತ್ತು ಯಾರಿಗೂ ಪುರುಸೊತ್ತಿಲ್ಲ. ಅಂಥ ವಾತಾವರಣವೂ ಇಲ್ಲ. ಇಂದಿನ ಯುಗ ಕಂಪ್ಯೂಟರ್ ಯುಗ. ಕಳ್ಳಕಾಕರ ಯುಗ. ದೊರೆಯೇ ಧೂರ್ತನಾಗುವ ಯುಗ. ವೈಜ್ಞಾನಿಕ ಯುಗ. ವೇಗದ ಯುಗ. ಆವೇಗದ ಯುಗ. ಉದ್ವೇಗದ ಯುಗ. ಪ್ರಮುಖವಾಗಿ ಈಗಿನ ಯುವಕ ಯುವತಿಯರು, ಮಧ್ಯವಯಸ್ಕರು ಮತ್ತು ಹಿರಿಯ ನಾಗರಿಕರು ಐಹಿಕ ಸುಖಕ್ಕೆ ಮತ್ತು ವಸ್ತು ಭೋಗಕ್ಕೆ ತುತ್ತಾಗಿ ಬಳಲಿದ್ದಾರೆ. ತಮ್ಮನ್ನು ಕಾಡುತ್ತಿರುವ ಕಾಯಿಲೆ ಯಾವುದು ಎನ್ನುವುದು ನರಳುತ್ತಿರುವ ವ್ಯಕ್ತಿಗೇ ತಿಳಿಯದಾಗಿದೆ.

ಇದನ್ನು ಗಮನದಲ್ಲಿ ಇಟ್ಟುಕೊಂಡು "ವೇದಾಂತ ಸತ್ಸಂಗ ಕೇಂದ್ರ"ದ ವತಿಯಿಂದ "ಶಂಕರಹೃದಯಂ" ಎಂಬ ಅಂತರ್ಜಾಲ ತಾಣವನ್ನು ತೆರೆಯಲಾಗುತ್ತಿದೆ. ವೇದಾಂತ ಪಾಠಗಳನ್ನು ಪ್ರಚುರ ಪಡಿಸುವುದು ಈ ವೆಬ್ ಸೈಟಿನ ಉದ್ದೇಶವಾಗಿರುತ್ತದೆ.
ವೆಬ್ ಸೈಟ್ ವಿಳಾಸ : http://www.satchidanandendra.org

ಶಂಕರ ಭಗವತ್ಪಾದರು ತೋರಿದ ಆದರ್ಶಗಳನ್ನು ಮನಸಾ ಮೆಚ್ಚುವವರು ಮತ್ತು ನೆಮ್ಮದಿ ಅರಸುತ್ತಿರುವವರು ಈ ತಾಣದ ಪ್ರಯೋಜನ ಪಡೆಯಬಹುದೆಂದು ವೇದಾಂತ ಸತ್ಸಂಗ ಕೇಂದ್ರದ ಪತ್ರಿಕಾ ಪ್ರಕಟಣೆ ತಿಳಿಸಿದೆ.
ಹೆಚ್ಚಿನ ವಿವರಗಳಿಗೆ : 98860 51222 ದೂರವಾಣಿ ಸಂಖ್ಯೆಯನ್ನು ತಲುಪಿರಿ.
ಇಮೇಲ್ : shankarahridayam@gmail.com

2 ಕಾಮೆಂಟ್‌ಗಳು:

  1. ಚಂದ್ರಶೇಖರ್ ರವರೆ,
    ತಾವು ಬ್ಲಾಗ್ನಲ್ಲಿ ನಮ್ಮ ವೆಬ್ ಸೈಟ್ ಪರಿಚಯ ಮಾಡಿ ಒಳ್ಳೆಯ ಕೆಲಸ ಮಾಡಿದ್ದೀರಿ. ಆದರೆ ಅದನ್ನು ಓದುವ ವ್ಯವಧಾನ ಎಷ್ಟು ಜನರಿಗಿದೆ? ಧನ್ಯವಾದಗಳು

    ಪ್ರತ್ಯುತ್ತರಅಳಿಸಿ